ಬಾಗಲಕೋಟೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಕರಲ್ಲಿ ಅರಿವು ಮೂಡಿಸಲು ಹಾಗೂ ಜಿಲ್ಲೆಯಲ್ಲಿ ಇತ್ತೀಚೆಗೆ ರಚನೆಯಾಗಿರುವ ಸ್ವಾಮಿ ವಿವೇಕಾನಂದ ಯುವ ಸ್ವ-ಸಹಾಯ ಗುಂಪುಗಳ ಮೇಲ್ವಿಚಾರಣೆ ಮಾಡಲು ಪ್ರತಿ ತಾಲೂಕಿಗೆ ಒಬ್ಬರಂತೆ ಪ್ರಸ್ತುತ ಮಾಸಿಕ 5 ಸಾವಿರ ರೂ.ಗಳ ಗೌರವಧನ ಹಾಗೂ 800 ರೂ.ಗಳ ಪ್ರಯಾಣ ಭತ್ಯೆ ಆಧಾರದ ಮೇಲೆ ಯುವ ಪರಿವರ್ತಕರನ್ನು ಆಯ್ಕೆ ಪ್ರಕ್ರಿಯೆಯನ್ನು ನವೆಂಬರ 23 ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ನವನಗರ, ಬಾಗಲಕೋಟೆಯಲ್ಲಿ ನಡೆಸಲಾಗುತ್ತಿದ್ದು, ಆಸಕ್ತರು ತಮ್ಮ ಬಯೋಡಾಟಾದೊಂದಿಗೆ ಆಗಮಿಸುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235896ಗೆ ಸಂಪರ್ಕಿಸಬಹುದಾಗಿದೆ.